ಪ್ರಸಿದ್ದ ಕಾದಂಬರಿಕಾರ ಎಸ್.ಎಲ್.ಭೈರಪ್ಪನವರ 'ವಂಶವೃಕ್ಷ' ಕಾದಂಬರಿ ಬದುಕಿನ ಬೇರುಗಳನ್ನು ಶೋಧಿಸುವ ಕೃತಿಯಾಗಿದೆ. ಬದುಕಿನ ಸೂಕ್ಷ್ಮ, ಸಂಕೀರ್ಣ ನೆಲೆಗಳ ಆಳಕ್ಕಿಳಿದು ಪ್ರಖರವಾದ ವೈಚಾರಿಕ, ತಾತ್ತ್ವಿಕ, ಮಾನವೀಯ ಅಂಶಗಳನ್ನು ಸಂವೇದನಾಶೀಲತೆಯಿಂದ ಶೋಧಿಸುವ ಕಾದಂಬರಿ 'ವಂಶವೃಕ್ಷ'. ಈ ಕಾದಂಬರಿಯಲ್ಲಿ ಆಧ್ಯಾತ್ಮ, ವಿದವೆಯ ಮರು ಮದುವೆ, ಎರಡನೇ ಮದುವೆ, ಪ್ರೀತಿ, ಕಟ್ಟು ಪಾಡು ಎಲ್ಲವನ್ನು ಕಾದಂಬರಿಕಾರರು ಚಿತ್ರಿಸಿದ್ದಾರೆ. 1965 ಭಾರತದಲ್ಲಿ ವಿಧವೆಯ ಮರು ವಿವಾಹವೆಂದರೆ ಮೂಗು ಮುರಿಯುತ್ತಿದ್ದರು...